Posts

Showing posts from 2022

ಮಳೆಗಾಲದ ತಯಾರಿ. (ಹನಿ ಕಡಿಯದ ಮಳೆ)

ಮೇ ತಿಂಗಳ ಕೊನೆಯ ಹೊತ್ತಿಗೆಲ್ಲಾ ಮಳೆಯ ದಿಬ್ಬಣ ಅಡಿಯಿಡುತಿತ್ತು. ದಿಬ್ಬಣವೆಂದರೆ ಗೌಜಿ ಗದ್ದಲ ಇಲ್ಲದೆ ಇದ್ದರೆ ಆಗುತ್ತದೆಯೇ? ಹಾಗಾಗಿ ಗುಡುಗು ಸಿಡಿಲುಗಳ ಆರ್ಭಟ, ಕೋರೈಸುವ ಮಿಂಚು, ಭೋರೆಂದು ಬೀಸುವ ಗಾಳಿ, ತನ್ನ ಆವೇಶವನ್ನೆಲ್ಲಾ  ಒಮ್ಮೆಗೆ ಹೊರ ಹಾಕುವಂತೆ ಧೋ ಎಂದು ಸುರಿಯುವ ಮಳೆ. ಒಂದಕ್ಕೊಂದು ಜೊತೆಯಾಗುತ್ತಾ, ಹಾಗೆ ಜೊತೆಯಾಗುತ್ತಲೇ ಜೊತೆಯಾಗಿಸುತ್ತಾ ಬರುತಿದ್ದ ಮಳೆರಾಯ ಥೇಟ್ ದಿಬ್ಬಣದ ಬೀಗರಂತೆ ಖುಷಿಯ ಜೊತೆ ಜೊತೆಗೆ ಆತಂಕ, ಏನಾಗಬಹುದು ಅನ್ನೋ ಅವ್ಯಕ್ತ ಭಯ, ಸುಸೂತ್ರವಾಗಿ ಜರುಗಿದರೆ ಸಾಕಪ್ಪ ಅನ್ನುವ ಆಸೆ ಎಲ್ಲವೂ ಮೂಡುವ ಹಾಗೆ ಮಾಡುತಿದ್ದ. ದಿಬ್ಬಣ ಬರುವ ಮುನ್ನ ಎಷ್ಟೆಲ್ಲಾ ತಯಾರಿಗಳು ಆಗಬೇಕು, ಎಷ್ಟೊಂದು ಕೆಲಸ. ಬೀಗರನ್ನು ಎದುರುಗೊಳ್ಳುವುದೆಂದರೆ ಅದೇನು ಅಷ್ಟು ಸುಲಭವೇ. ಅದೆಷ್ಟು ಜಾಗ್ರತೆ, ಅದೆಷ್ಟು ತಯಾರಿ ಮಾಡಲೇ ಬೇಕು. ಒಮ್ಮೆ ಬೀಗರು ಅಡಿಯಿಟ್ಟ ಮೇಲೆ ಮುಗಿಯಿತು. ಅವರನ್ನು ಉಪಚರಿಸಲು ಎಷ್ಟೊಂದು ಕೆಲಸ ಆಗಿರಬೇಕು.  ಎಲ್ಲಕ್ಕಿಂತ ಮುಖ್ಯವಾಗಿ ಬಿಸಿಲು ಇರುವಾಗಲೇ ಹಪ್ಪಳ ಸಂಡಿಗೆ ಮಾಡಿ ಅದನ್ನು ಡಬ್ಬದಲ್ಲಿ ತುಂಬಿಟ್ಟುಕೊಳ್ಳಬೇಕು. ಅದೂ ತರಾವರಿ ಹಪ್ಪಳಗಳು ಇದ್ದರೂ ಹಲಸಿನ ಹಪ್ಪಳಕ್ಕೆ ಅಗ್ರಸ್ಥಾನ. ರಾಜ ಅದು. ಉಳಿದ ಮಂತ್ರಿ ಮಂಡಲದಂತೆ ಅಕ್ಕಿ ಹಪ್ಪಳ, ಸಂಡಿಗೆ, ಮಜ್ಜಿಗೆ ಮೆಣಸು ಹೀಗೆ ಉಳಿದವರು ಇರುತಿದ್ದರು. ಆಮೇಲೆ  ಉಪ್ಪಿನಕಾಯಿ ಅದೂ ಮಿಡಿ ಮಾವಿನ ಉಪ್ಪಿನಕಾಯಿ, ಸ್ವಲ್ಪ ನಿಂಬೆಕಾಯಿ ಉಪ್ಪಿನಕ...

ಕ್ಷಮಿಸುವುದು ಎಂದರೆ ಮರೆಯುವುದಲ್ಲ.

 ನುವ್ವು ನಾಗಪಾಮುಲಾಂಟಿದವಿ , ಏಮಿ ಮರ್ಚಿಪೊಲೆವು, ಸಮಯಕೋಸಂ ಚೂಸ್ತು ಉಂಟಾವು, ನನ್ನ ಅಂಗೈಯನ್ನು ಅವರ ಬೊಗಸೆಯಲ್ಲಿ ಇಟ್ಟುಕೊಂಡು ಹೇಳುವಾಗ ಮುಸ್ಸಂಜೆ. ಆಂಧ್ರದ ಕಾಡಿನ ಅಂಚಿನಲ್ಲಿ, ಕೃಷ್ಣಾ ನದಿಯ ತೀರದಲ್ಲಿ ಇದ್ದ ಆ ಪುಟ್ಟ ಗುರುಕುಲದಲ್ಲಿ ಆಗಷ್ಟೇ ಕತ್ತಲು ಹೊಸಿಲು ದಾಟಿ ಬಂದಿತ್ತು. ಕಾಣಿಸಿದರೂ ಕಾಣಿಸದ ಹಾಗಿನ ಬೆಳಕು. ಅಲ್ಲಿ  ಇದ್ದದ್ದೇ ಹತ್ತು ಮನೆಗಳು. ಒಂದಷ್ಟು ವಿದ್ಯಾರ್ಥಿಗಳು. ಸಣ್ಣಗೆ ನಕ್ಕಿದ್ದೆ. ಕತ್ತಲು ಅದಾಗಲೇ ಆವರಿಸುತ್ತಿದ್ದರಿಂದ ನನ್ನ ಮುಖಭಾವ ಅವರಿಗೆ ಕಾಣಿಸಿರಲಿಲ್ಲ. ಮೆಲ್ಲಗೆ ಕೈ ಬಿಡಿಸಿಕೊಂಡು ಕಾಯುತ್ತಿದ್ದ  ಕರುವಿನ ಹಿಂದೆ ಮನೆಗೆ ಹೊರಟೆ. ಅಣ್ಣನಿಗೆ ಮೊದಲ ಕೆಲಸ ಸಿಕ್ಕಿದಾಗ ಸಂಭ್ರಮ. ನಮ್ಮದೇ ಮನೆ, ನಮ್ಮದೇ ಬದುಕು ಅನ್ನುವುದಷ್ಟೇ ಮುಖ್ಯವಾಗಿತ್ತೇ ಹೊರತು ಯಾವ ಊರು, ಯಾವ ರಾಜ್ಯ ಅನ್ನೋದು ಅಲ್ಲವೇ ಅಲ್ಲ. ಸ್ವತಂತ್ರ ಬದುಕು ಬೇಕಾಗಿತ್ತು ಅಷ್ಟೇ.  ಕೃಷ್ಣಾ ನದಿ ದೋಣಿಯಲ್ಲಿ ದಾಟಿದರೆ ದಂಡೆಯ ಮೇಲೆ ಒಂದು ಪುಟ್ಟ ಊರು. ಕುಗ್ರಾಮ ಎನ್ನುವುದಕ್ಕೆ ಉದಾಹರಣೆ. ಬಡತನವೆನ್ನುವುದು ಅಲ್ಲಿ ಮರಳಿನ ಹಾಗೆ ಹಬ್ಬಿಕೊಂಡಿತ್ತು. ಅಲ್ಲಿಂದ ಒಂದು ಮೈಲಿ ನಡೆದರೆ ಒಂದು ಐವತ್ತು ಎಕರೆ ಜಾಗವನ್ನು ಖರೀದಿಸಿ ಅಲ್ಲೊಂದು ಪುಟ್ಟ ಗುರುಕುಲ ಕಟ್ಟಿದ್ದರು. ಹಳೆಯ ಕಾಲದ ಕಾನ್ಸೆಪ್ಟ್. ಗುರುವಿನ ಮನೆಯಲ್ಲಿ ಶಿಷ್ಯರ ವಾಸ. ಹೊಸಕಾಲದ ಗುರುಗಳು ಆಗಿದ್ದರಿಂದ  ಊಟಕ್ಕೆ ಮಾತ್ರ ವಿದ್ಯಾರ್ಥಿಗಳಿಗೆ ಬೇರೆಯ ವ್ಯವಸ...

ಚೌಡಿಯ ಹರಕೆ

ದನ ಕರು ಹಾಕಿದೆ ಎಂದರೆ ಹಾಲು ಕರೆದು ಬಳಸುವ ಮುನ್ನ ಚೌಡಿಗೆ ಕೊಡುವುದು ಮಲೆನಾಡಿನ ಹಳೆಯ ಕಾಲದಿಂದಲೂ ನಡೆದು ಬಂದ ಪದ್ದತಿ. ಮೇಯಲು ಹೋದ ದನವೊ, ಕರುವೋ ಬರಲಿಲ್ಲ ಎಂದರೂ ಚೌಡಿಗೊಂದು ಹರಕೆ ಹೊತ್ತುಕೊಂಡೆ ಹುಡುಕಲು ಹೋಗುವುದು ಸಾಮಾನ್ಯ. ಇಡೀ ಊರು ಕಾಯುವವಳು ಅವಳು ಎಂಬ ನಂಬಿಕೆ. ರಾತ್ರಿಯ ಹೊತ್ತು ಗೆಜ್ಜೆ ಸದ್ದು ಕೇಳಿದರೆ, ಕೋಲು ಕುಟ್ಟಿಕೊಂಡು ಯಾರೋ ಓಡಾಡುವ ಸದ್ದು ಕೇಳಿಸಿದರೆ ಯಾವ ಕಾರಣಕ್ಕೂ ಹೊರಗೆ ಬರಬಾರದು ಎನ್ನುವುದು ಗಾಢ ನಂಬಿಕೆ. ಸಂಪಗೋಡಿನಲ್ಲೂ ಹೀಗೊಂದು ನಂಬಿಕೆ ಇತ್ತು. ಆ ನಂಬಿಕೆ ಜೊತೆಜೊತೆಗೆ ಬೆಳೆದುಬಂದವಳು ನಾನು. ಮನೆಯಲ್ಲಿ ಒಬ್ಬರೇ ಇದ್ದರೆ ಅವತ್ತು ಹೆಜ್ಜೆಯ ಸದ್ದು ಜೋರಾಗಿ ಕೇಳಿಸುತ್ತೆ ಅನ್ನೋದು ದೊಡ್ಡವರ ಅನುಭವ. ಅವೆಲ್ಲಾ ಅರ್ಥವಾಗುವ ವಯಸ್ಸು ಅಲ್ಲದಿದ್ದರೂ ಭಯ ಕಾಡದೆ ಇರುವುದಕ್ಕೆ ಅದೊಂದು ನಂಬಿಕೆ ಸಾಕಾಗಿತ್ತು. ಉಳಿದೆಲ್ಲಾ ಹಾಗಾಗಿ ದೊಡ್ಡ ವಿಷಯವೇ ಆಗಿರಲಿಲ್ಲ.  ಆ ಊರು ಮುಳುಗಿ ಇನ್ನೆಲ್ಲೋ ಹರಡಿ, ಬೆಂಗಳೂರಿನಲ್ಲಿ ಅಸ್ತಿತ್ವ ಕಂಡುಕೊಳ್ಳುವ ಹೊತ್ತಿಗೆ ಚೌಡಿ ಅನ್ನೋದು ನೆನಪಿನ ಆಳದಲ್ಲಿ ಹೂತು ಹೋಗಿ ಮರೆತೇ ಹೋಗಿದೆ ಅನ್ನುವ ಹಾಗಾಗಿತ್ತು. ಅಹಿಗಿನ್ನೂ ಎರಡು ವರ್ಷವೂ ತುಂಬಿರಲಿಲ್ಲ. ಹೀಗೆ ಒಮ್ಮೆ ಊರಿಗೆ ಹೋಗಿದ್ದೆವು. ರಾತ್ರಿ ಎಂದೂ ಇಲ್ಲದ ವಿಪರೀತ ಹಟ. ಏನು ಸಮಾಧಾನಿಸಿದರೂ, ಹೊತ್ತು ತಿರುಗಿದರೂ ನಿದ್ದೆ ಬಂದಂತೆ ಆಗುವ ಮಗು ಹಾಸಿಗೆಯಲಿ ಮಲಗಿಸಿದ ತಕ್ಷಣ ಮತ್ತೆ ಜೋರು ಹಠ. ಬೆಳಿಗ್ಗೆ ಪ್ರಯಾಣ ಮಾಡಿದ ಸು...